2018 ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪಕ್ಷದ ಕಾರ್ಯಕರ್ತರು ಮತ್ತೆ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮರಳಿ ಕರೆತರುವ ಪ್ರಯತ್ನ ನಡೆಸಿದ್ದಾರೆ. ಆದರೆ, ಮುಖ್ಯಮಂತ್ರಿ ಆಕಾಂಕ್ಷೆಯಾಗಿರುವ ಇತರೆ ಬಿಜೆಪಿ ನಾಯಕರು ಈ ನಡೆಯನ್ನು ವಿರೋಧಿಸುವ ಸಾಧ್ಯತೆಗಳಿವೆ.
2014 ರ ಲೋಕ ಸಭೆ ಚುನಾವಣೆಯಲ್ಲಿ ಮೋದಿ ಸರಕಾರಕ್ಕೆ ಮುನ್ನಡೆಯನ್ನು ನೀಡುವ ಉದ್ದೇಶದಿಂದ, ಬಿ.ಎಸ್.ಯಡಿಯೂರಪ್ಪ ಮತ್ತೆ ಸ್ವಪಕ್ಷಕ್ಕೆ ಮರಳಿದ್ದರು. ಆದರೆ ಅವರ ಮೇಲಿದ್ದ ಭ್ರಷ್ಟಾಚಾರ ಪ್ರಕರಣಗಳು ಇತ್ಯರ್ಥವಾಗದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಿಂದ ಹೊರಗಿಡಲಾಗಿತ್ತು.