ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

Sampriya

ಬುಧವಾರ, 9 ಅಕ್ಟೋಬರ್ 2024 (14:32 IST)
Photo Courtesy X
ಉಡುಪಿ: ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಪರೀತ ಜ್ವರ, ಗಂಟಲಿನ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದಾಗಿ  ಮಂಗಳವಾರ ರಾತ್ರಿ ಅವರನ್ನು ಉಡುಪಿಯ ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿದೆ.

ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸಿದ್ದು, ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಬುಧವಾರ ತಿಳಿಸಿವೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ