ಮಾಜಿ ಶಾಸಕ ಅನಿಲ್ ಲಾಡ್ ಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಜೀವ ಬೆದರಿಕೆ

ಗುರುವಾರ, 13 ಡಿಸೆಂಬರ್ 2018 (15:00 IST)
ಬೆಂಗಳೂರು : ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಅನಿಲ್ ಲಾಡ್ ಗೆ ಭೂಗತ ಪಾತಕಿ ರವಿ ಪೂಜಾರಿ ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಅನಿಲ್ ಲಾಡ್ ಗೆ ಬೆಂಗಳೂರಿನ ಶಿವಕುಮಾರ್ ಎಂಬುವವರು 15 ಕೋಟಿ ಹಣ ನೀಡಬೇಕಿತ್ತು. ಆ ಹಣವನ್ನು ವಾಪಾಸ್ಸು ಕೇಳಿದ್ದಕ್ಕೆ ಭೂಗತ ಪಾತಕಿ ರವಿ ಪೂಜಾರಿಯಿಂದ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.


ಡಿಸೆಂಬರ್ 8ರಂದು ಮೆಸೇಜ್ ಮಾಡಿ ನಿನ್ನನ್ನು ಶೂಟ್ ಮಾಡಿ ಕೊಲ್ಲುವುದಾಗಿ  ಗಣಿಧಣಿ ಅನಿಲ್ ಲಾಡ್ ಗೆ ರವಿ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಆದಕಾರಣ  ತಮಗೆ ಸೂಕ್ತ ರಕ್ಷಣೆ ನೀಡುವಂತೆ ಅನಿಲ್ ಲಾಡ್ ಡಿಸಿಎಂ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ