ಕಾಂಗ್ರೆಸ್ ದೇವೇಗೌಡರನ್ನ ಸೋಲಿಸೋ ಹುನ್ನಾರ ಮಾಡಿದ್ದಾರೆ- ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ಸುರೇಶ್ ಗೌಡ

ಮಂಗಳವಾರ, 7 ಮೇ 2019 (14:32 IST)
ತುಮಕೂರು : ಸಮ್ಮಿಶ್ರ ಸರ್ಕಾರವನ್ನ ಬೀಳಿಸೋಕೆ ಕಾಂಗ್ರೆಸ್ ನವರೇ ಪ್ಲಾನ್ ಮಾಡಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.




ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಗೆದ್ದರೇ ಅವರ ಕುಟುಂಬದವರು ಬರುತ್ತಾರೆ ಅನ್ನೋ ಆತಂಕ ಇದೆ. ಹೀಗಾಗಿ ಮಂಡ್ಯ, ರಾಮನಗರದ ರೀತಿ ಆಗುತ್ತದೆ ಎಂದು ಕಾಂಗ್ರೆಸ್ ದೇವೇಗೌಡರನ್ನ ಸೋಲಿಸೋ ಹುನ್ನಾರ ಮಾಡಿದ್ದಾರೆ.

ನೂರಕ್ಕೆ ನೂರರಷ್ಟು ದೇವೇಗೌಡರನ್ನ ದಿಕ್ಕುತಪ್ಪಿಸಿದ್ದಾರೆ. ಆದ್ದರಿಂದ ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ ದೇವೇಗೌಡರನ್ನ ಗೆಲ್ಲಿಸುವುದಕ್ಕೆ ಒಂದು ರೂಪಾಯಿ ಕೆಲಸ ಮಾಡಿಲ್ಲ. ಅಲ್ಲದೆ ಉಪಮುಖ್ಯಮಂತ್ರಿ ಪರಮೇಶ್ವರ್ ಕೂಡ ಎಲ್ಲೂ ಸಭೆ ಮಾಡಿ ಗೆಲ್ಲಿಸೋಕೆ ಶ್ರಮಿಸಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಸಮ್ಮಿಶ್ರ ಸರ್ಕಾರವನ್ನ ಬೀಳಿಸೋಕೆ ಕಾಂಗ್ರೆಸ್ ನವರೇ ಪ್ಲಾನ್ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಸಮ್ಮಿಶ್ರ ಸರ್ಕಾರ ಬೀಳೋದು ನೂರಕ್ಕೆ ನೂರು ಸತ್ಯ. ಫಲಿತಾಂಶ ಬಂದ ಬಳಿಕ ಯಾರು ಏನೇನು ಪ್ಲಾನ್ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ. ಮೈಸೂರಿನಲ್ಲಿ ವಿಜಯ ಶಂಕರ್, ಮಂಡ್ಯದಲ್ಲಿ ನಿಖಿಲ್ ಸೋಲ್ತಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ