ಪತಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್: ಜೈಲಿನಲ್ಲಿ ಮಾಜಿ ನಕ್ಸಲ್ ವಿಚಾರಣೆ

ಸೋಮವಾರ, 18 ಸೆಪ್ಟಂಬರ್ 2017 (16:17 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಎಲ್ಲ ಆಂಗಲ್`ಗಳಲ್ಲೂ ತನಿಖೆ ನಡೆಸುತ್ತಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ನಕ್ಸಲ್ ಒಬ್ಬರನ್ನೂ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ ಎಂದು ಮಾಧ್ಯಮವೊಮದು ವರದಿ ಮಾಡಿದೆ.

ಗೌರಿ ಲಂಕೇಶ್ ಮಧ್ಯಸ್ಥಿಕೆಯಲ್ಲಿ ಶಸ್ತ್ರ ತ್ಯಜಿಸಿ ಮುಖ್ಯವಾಹಿನಿ ಬಂದಿದ್ದ ಮಾಜಿ ನಕ್ಸಲ್ ಕನ್ಯಾಕುಮಾರಿ ಸದ್ಯ ಬೆಂಗಲೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕೇರಳದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ಎನ್`ಐಎ ತನಿಖೆ ನಡೆಸಿದ ಸಂದರ್ಭ ಗೌರಿ ಲಂಕೇಶ್ ಬಗ್ಗೆ ಕನ್ಯಾಕುಮಾರಿ ಅಸಮಾಧಾನ ಹೊರ ಹಾಕಿದ್ದರು. ಮುಖ್ಯವಾಹಿನಿಗೆ ಬಂದ ಬಳಿಕವೂ ನಮಗೆ ಯಾವುದೇ ವಿಶೇಷ ಪ್ಯಾಕೇಜ್ ಲಭ್ಯವಾಗಿಲ್ಲ. ಗೌರಿಗೆ ದೇವರು ಬುದ್ಧಿ ಕಲಿಸುತ್ತಾನೆ ಎಂದು ಅಸಮಾಧಾನ ಹೊರ ಹಾಕಿದ್ದರು ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಗೌರಿ ಲಂಕೇಶ್ ಹತ್ಯೆಯಲ್ಲಿ ನಕ್ಸಲೀಯರ ಕೈವಾಡವಿದೆಯಾ ಎಂಬ ಬಗ್ಗೆ ಎಸ್`ಐಟಿ ನಡೆಸುತ್ತಿದ್ದು, ಕಳೆದೆರಡು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕನ್ಯಾಕುಮಾರಿ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ