ಸಾರ್ವಜನಿಕ ಸಭೆಯಲ್ಲಿ ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಗುರುವಾರ, 22 ಜೂನ್ 2017 (17:12 IST)
ಕಾವೇರಿ ವಿಚಾರದಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಸಾರ್ವಜನಿಕ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಕಣ್ಣೀರಿಟ್ಟ ಘಟನೆ ನಡೆಯಿತು.
 
ಜಿಲ್ಲೆಯ ಅರಕಲಗೂಡು ತಾಲೂಕಿನ ಕಟ್ಟೇಪುರ ಗ್ರಾಮದಲ್ಲಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಸಮಾಧಾನ ತಂದಿಲ್ಲ. ಸಂಪೂರ್ಣ ರೈತರ ಸಾಲ ಮನ್ನಾ ಆಗಬೇಕು. ಸಂಪೂರ್ಣ ರೈತರ ಸಾಲ ಮನ್ನಾಕ್ಕಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಗುಡುಗಿದ್ದಾರೆ.
 
ನಾನೀಗ ಉಪವಾಸ ಸತ್ಯಾಗೃಹ ಕೂರುವ ಸ್ಥಿತಿಯಲ್ಲಿಲ್ಲ. ರಾಜ್ಯದ ರೈತರ ಸ್ಥಿತಿ ಶೋಚನೀಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
 
ಮುಂಬರುವ ಚುನಾವಣೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ 
ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ