ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಆಯೋಗ ರಚನೆ: ಸಿಎಂ ಬೊಮ್ಮಾಯಿ ಘೋಷಣೆ

ಗುರುವಾರ, 17 ಮಾರ್ಚ್ 2022 (20:42 IST)
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಆಯೋಗ ರಚನೆ: ಸಿಎಂ ಬೊಮ್ಮಾಯಿ ಘೋಷಣೆವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರದಿಂದ ಆಯೋಗ ರಚನೆ ಬಗ್ಗೆ ಸಿಎಂ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ. 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆಗೆ ಅಧಿಕಾರಿಗಳ ವೇತನ ಸಮಿತಿ ಮಾಡುವಂತೆ ಸಿಎಂಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದರು.
 
ಬಜೆಟ್ ಮೇಲಿನ ಚರ್ಚೆಗೆ ಸಿಎಂ ಬೊಮ್ಮಾಯಿ ಉತ್ತರ-ರಾಜ್ಯದಲ್ಲಿ ಪ್ರಥಮ ಬಾರಿಗೆ ಹಸಿರು ಬಜೆಟ್ ಮಾಡಿದ್ದೇವೆ, ಪ್ರತಿ ವರ್ಷ ಎಕಲಾಜಿಕಲ್ ಡೆಫಿಸಿಟ್ ಏನಾಗುತ್ತೋ ಅದಕ್ಕೆ ಎಕಲಾಜಿಕಲ್ ಬಜೆಟ್ ಮೀಸಲಿಡಬೇಕು, ಈಗ ಪರಿಸರ ನಾಶವಾದರೆ ಮುಂದೆ ಸರಿಪಡಿಸಲು ಆಗಲ್ಲ. ಹಾಗಾಗಿ ಬಜೆಟ್‌ನಲ್ಲಿ ಹೊಸ ರೂಪ ನೀಡಿದ್ದೇವೆ, ನಮ್ಮದು ಸೂಕ್ಷ್ಮ ಬಜೆಟ್ ಆಗಿದೆ ಎಂದಿದ್ದಾರೆ.
 ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರದಿಂದ ಆಯೋಗ ರಚನೆ ಬಗ್ಗೆ ಸಿಎಂ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ. 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆಗೆ ಅಧಿಕಾರಿಗಳ ವೇತನ ಸಮಿತಿ ಮಾಡುವಂತೆ ಸಿಎಂಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದರು.
 
ಬಜೆಟ್ ಮೇಲಿನ ಚರ್ಚೆಗೆ ಸಿಎಂ ಬೊಮ್ಮಾಯಿ ಉತ್ತರ-ರಾಜ್ಯದಲ್ಲಿ ಪ್ರಥಮ ಬಾರಿಗೆ ಹಸಿರು ಬಜೆಟ್ ಮಾಡಿದ್ದೇವೆ, ಪ್ರತಿ ವರ್ಷ ಎಕಲಾಜಿಕಲ್ ಡೆಫಿಸಿಟ್ ಏನಾಗುತ್ತೋ ಅದಕ್ಕೆ ಎಕಲಾಜಿಕಲ್ ಬಜೆಟ್ ಮೀಸಲಿಡಬೇಕು, ಈಗ ಪರಿಸರ ನಾಶವಾದರೆ ಮುಂದೆ ಸರಿಪಡಿಸಲು ಆಗಲ್ಲ. ಹಾಗಾಗಿ ಬಜೆಟ್‌ನಲ್ಲಿ ಹೊಸ ರೂಪ ನೀಡಿದ್ದೇವೆ, ನಮ್ಮದು ಸೂಕ್ಷ್ಮ ಬಜೆಟ್ ಆಗಿದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ