ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

ಶುಕ್ರವಾರ, 21 ಡಿಸೆಂಬರ್ 2018 (10:02 IST)
ಚಿತ್ರದುರ್ಗ : ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಹಿರಿಯೂರಿನ ಹುಲಿತೊಟ್ಲು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.


ಚಿತ್ತಪ್ಪ, ಶಶಿಧರ್‌ ,ಭಾಗ್ಯಮ್ಮ ಮತ್ತು ಶಶಿಧರ್‌ ಎನ್ನುವವರು ಮೃತಪಟ್ಟ ದುರ್ದೈವಿಗಳು. ಗುರುವಾರ ರಾತ್ರಿ ಒಂದೇ ಕುಟುಂಬದ 7 ಮಂದಿ ರಾಗಿ ಮುದ್ದೆ ಮತ್ತು ಅವರೆಕಾಳು ಸಾಂಬಾರು ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಾಲ್ವರು ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿದ್ದಾರೆ.


ಮುತ್ತುರಾಜ್‌ (14), ಸದಾನಂದ (13)ಮತ್ತು ಅಜಯ್‌ ಗೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗದ ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ