ಸ್ವಾತಂತ್ರ ಹೋರಾಟಗಾರ, ಹಿರಿಯ ಸಾಹಿತಿ ಕೊ. ಚನ್ನಬಸಪ್ಪ ಇನ್ನಿಲ್ಲ

ಶನಿವಾರ, 23 ಫೆಬ್ರವರಿ 2019 (12:36 IST)
ಬೆಂಗಳೂರು : ಸ್ವಾತಂತ್ರ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಕೊ. ಚನ್ನಬಸಪ್ಪ (98) ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.


ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚೆನ್ನಬಸಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದಾರೆ.


ವಿದ್ಯಾರ್ಥಿಯಾಗಿದ್ದಾಗಲೇ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗಿ ಸೆರೆವಾಸ ಅನುಭವಿಸಿದ್ದರು. 2015ರಲ್ಲಿ ವಿಜಯಪುರದಲ್ಲಿ ನಡೆದ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇದಲ್ಲದೇ ಅವರು ನಿವೃತ್ತ ಜಿಲ್ಲಾ ನ್ಯಾಯಧೀಶ ಕೂಡ ಆಗಿದ್ದರು.


ಚೆನ್ನಬಸಪ್ಪ ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ ದೊರೆತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ