ಇನ್ನು ಪ್ರಕರಣ ಸಂಬಂಧ ಮೃತ ದಿವ್ಯಾಶ್ರೀಯ ತಂದೆ ಅನುಷಾಳ ಮೇಲೆ ಶಂಕೆ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅನುಷಾಳನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಹೌದು, 8 ತಿಂಗಳಿನಿಂದ ನನ್ನ ಜೊತೆ ಇದ್ದವಳು ನನ್ನ ಮಾತಿಗೆ ಬೆಲೆ ಕೊಡದೆ ಮದುವೆ ಮಾಡಿಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯನ್ನು ನಾನೇ ಕರೆಸಿಕೊಂಡು ಕುತ್ತಿಗೆಗೆ ವೈರ್ ಬಿಗಿದು ಹತ್ಯೆಗೈದೆ ಎಂದು ಒಪ್ಪಿಕೊಂಡಿದ್ದಾಳೆ.
ಇನ್ನು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅನುಷಾಳನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.