ಆಡಿಯೋ ಕೇಸ್ ನಿಂದ ನಿರಾಳ; ವಿಶೇಷ ಪೂಜೆ ಸಲ್ಲಿಸಿದ ಬಿಎಸ್ವೈ

ಶುಕ್ರವಾರ, 22 ಫೆಬ್ರವರಿ 2019 (17:56 IST)
ಆಪರೇಷನ್ ಕಮಲ ಆಡಿಯೋ ಪ್ರಕರಣದ‌ ತನಿಖೆಗೆ ಹೈಕೋರ್ಟ ಮಧ್ಯಂತರ ತಡೆ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೊಂಚ ಮಟ್ಟಿಗೆ ನಿರಾಳರಾಗಿದ್ದಾರೆ.

ಆಡಿಯೋ ಪ್ರಕರಣದಿಂದ ಸ್ವಲ್ಪ ಮಟ್ಟಿಗೆ ನಿರಾಳರಾಗಿರುವ ಬಿ.ಎಸ್. ಯಡಿಯೂರಪ್ಪ ಬೀದರನಲ್ಲಿ ವೀರಭದ್ರೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೀದರ್ ನಲ್ಲಿ ಬಿ.ಎಸ್. ವೈ ಟೆಂಪಲ್ ರನ್‌ ಮಾಡಿದರು. ವಿಶೇಷ ಪೂಜೆ ಸಲ್ಲಿಸಿ ವೀರಭದ್ರೇಶ್ವರ ಆರ್ಶಿರ್ವಾದ ಪಡೆದುಕೊಂಡರು. ಹುಮ್ನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಯಡಿಯೂರಪ್ಪ, ನಿರಾಳಾರಾಗಿದ್ರಿಂದ ಅವರ ಮುಖದಲ್ಲಿ ಮಂದಹಾಸ ಎದ್ದುಕಂಡಿತು.

ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಹುಮ್ನಾಬಾದ್ ಪಟ್ಟಣಕ್ಕೆ ಆಗಮಿಸಿದ ಬಿಎಸ್ ವೈಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಪಕ್ಷದ ಮುಖಂಡರು ಸಾಥ್ ನೀಡಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ