ನಾಳೆಯಿಂದ ಉಪಚುನಾವಣೆಯಲ್ಲಿ ಪ್ರಚಾರ: ಸಿಎಂ ಘೋಷಣೆ

ಬುಧವಾರ, 29 ಮಾರ್ಚ್ 2017 (13:40 IST)
ನಾಳೆಯಿಂದ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಅಧಿವೇಶನದ ಹಿನ್ನೆಲೆಯಲ್ಲಿ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಇದೀಗ ಅಧಿವೇಶನ ಮುಕ್ತಾಯಗೊಂಡಿದ್ದರಿಂದ ಉಪಚುನಾವಣೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.
 
ನಾಳೆಯಿಂದ ಉಪಚುನಾವಣೆ ಪ್ರಚಾರ ಅಂತ್ಯಗೊಳ್ಳುವವರೆಗೆ ಎರಡೂ ಕ್ಷೇತ್ರಗಳಲ್ಲಿ ಠಿಕಾಣಿ ಹೂಡಿ, ಪಕ್ಷದ ಅಭ್ಯರ್ಥಿಯ ಗೆಲುವಿಗೆ ರಣತಂತ್ರ ರೂಪಿಸಲಾಗುವುದು ಎಂದರು.
 
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಖಚಿತ. ಬಿಜೆಪಿಯವರು ತಿಪ್ಪರಲಾಗಾ ಹಾಕಿದರೂ ಉಪಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಜನತೆ ಬಿಜೆಪಿಯನ್ನು ಯಾವುದೇ ಕಾರಣಕ್ಕೂ ನಂಬುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ