ಗ್ಯಾರಂಟಿ ಈಡೇರಿಕೆಯೇ ನಮ್ಮ ಮೊದಲ ಆದ್ಯತೆಯಾಗಿತ್ತು: ಪರಮೇಶ್ವರ್

ಭಾನುವಾರ, 16 ಜುಲೈ 2023 (09:21 IST)
ತುಮಕೂರು : ಅಭಿವೃದ್ದಿ ಕೆಲಸಕ್ಕಿಂತ ಗ್ಯಾರಂಟಿ ಈಡೇರಿಕೆಯೇ ನಮ್ಮ ಮೊದಲ ಆದ್ಯತೆಯಾಗಿತ್ತು. ಈ ಕಾರಣಕ್ಕೆ ಬಜೆಟ್ನಲ್ಲಿ ಹೊಸ ಅಭಿವೃದ್ಧಿ ಕೆಲಸಕ್ಕೆ ಹಣ ಮೀಸಲಿಟ್ಟಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ತುಮಕೂರು ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಬಳಿಕ ಮಾಧ್ಯಮವರೊಂದಿಗೆ ಅವರು ಮಾತನಾಡಿದದರು. ಈ ವೇಳೆ ತುಮಕೂರಿಗರ ಮೆಟ್ರೋ ರೈಲಿನ ಕನಸು ಯಾವಾಗ ನನಸಾಗುತ್ತದೆ ಎಂಬ ಪ್ರಶ್ನೆಗೆ, ಈಗ ನಮ್ಮ ಸರ್ಕಾರದ ಮೊದಲ ಆದ್ಯತೆ 5 ಗ್ಯಾರಂಟಿಗಳನ್ನು ಈಡೇರಿಸುವುದು.

ನಮ್ಮ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಈಗ ನಾವು ಮಂಡಿಸಿದ ಬಜೆಟ್ ಕೇವಲ ಗ್ಯಾರಂಟಿ ಯೋಜನೆಯ ಹಣದ ಖರ್ಚು ಹೊಂದಿಸಲು ಮಾಡಿರುವಂತಹ ಬದಲಾವಣೆಯ ಬಜೆಟ್ ಆಗಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ