ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಸಾಧ್ಯವಿಲ್ಲ ಎಂದವರ್ಯಾರು ಗೊತ್ತಾ?

ಬುಧವಾರ, 3 ಜುಲೈ 2019 (10:27 IST)
ಮೈಸೂರು : ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಹೇಳಿದ್ದಾರೆ.




ಈ ಹಿಂದೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪರ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡರು  ಇದೀಗ ಮತ್ತೆ ಮೋದಿ ಪರ ಬ್ಯಾಟ್ ಬೀಸಿದ್ದಾರೆ. ಅಲ್ಲದೇ 5 ವರ್ಷ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ. ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಅನುಮಾನ ಬೇಡ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ  ಜಿ.ಟಿ.ದೇವೇಗೌಡರು, ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ. ಈ ಬಗ್ಗೆ ಎರಡು ಮಾತಿಲ್ಲ.. ಸರ್ಕಾರ ರಚನೆ ಬಳಿಕ ಆಪರೇಷನ್ ಕಮಲಕ್ಕೆ ಬಿಜೆಪಿ ಪ್ರಯತ್ನಿಸಿತ್ತು. ಆದರೆ ಮೋದಿ ಮತ್ತೆ ಪ್ರಧಾನಿಯಾದ ಮೇಲೆ ಅಪರೇಷನ್ ಕಮಲ ನಿಂತಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ