ದೇಶದ ಅತಿ ಉದ್ದದ ಸಿಗಂದೂರು ಸೇತುವೆ ಲೋಕಾರ್ಪಣೆ, ಶಿಷ್ಟಾಚಾರ ಉಲ್ಲಂಘನೆ ಎಂದ ಸಿಎಂಗೆ ಗಡ್ಕರಿ ಪ್ರತಿಕ್ರಿಯೆ
ಖುದ್ದು ಹಾಜರಾಗಲು ಸಾಧ್ಯವಾಗದಿದ್ದಲ್ಲಿ ವಿಡಿಯೊ ಕಾನ್ಫೆರೆನ್ಸ್ ಮೂಲಕ ಭಾಗಿಯಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿನಂತಿಸಲಾಗಿತ್ತು ಎಂದಿದ್ದಾರೆ.
ಸೇತುವೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 11ರಂದು ಅಧಿಕೃತ ಆಹ್ವಾನ ನೀಡಲಾಗಿತ್ತು. ಖುದ್ದು ಹಾಜರಾಗಲು ಸಾಧ್ಯವಾಗದಿದ್ದಲ್ಲಿ ವರ್ಚುವಲ್ ಆಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಜುಲೈ 12ರಂದು ಕಳುಹಿಸಿದ ಪತ್ರದಲ್ಲಿ ತಿಳಿಸಲಾಗಿತ್ತು ಎಂದು ಗಡ್ಕರಿ ಎಕ್ಸ್ನಲ್ಲಿ ತಿಳಿಸಿದ್ದಾರೆ.