ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ಭೂಸ್ವಾಧೀನ ಅಧಿಕಾರಿ ಭೀಮಾನಾಯಕ್ ಕಾರು ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಯಾವ ತನಿಖೆ ಬೇಕಾದರೂ ಮಾಡಲಿ. ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯೆಗೆ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಸರಕಾರದ ಭ್ರಷ್ಟಾಚಾರದ ಕುರಿತು ಹೇಳಿದಾಗ ಸಿಎಂ ಸಿದ್ದರಾಮಯ್ಯ ಕೋಪಿಸಿಕೊಂಡಿದ್ದರು. ಆದರೆ, ಬ್ರಹ್ಮಾಂಡ ಭ್ರಷ್ಟಾಚಾರದ ಚಿಕ್ಕರಾಯಪ್ಪ ಯಾರು? ಅವರು ಸಿಎಂ ಸಿದ್ದರಾಮಯ್ಯಗೆ ಎಷ್ಟು ಆಪ್ತರೆಂದು ರಾಜ್ಯದ ಜನತೆಗೆ ಗೊತ್ತು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.