ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಬ್ರಹ್ಮಿಣಿ ಸ್ಟೀಲ್ಸ್ ಕಂಪೆನಿಯ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದ್ದರಿಂದ, ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾಗೆ ಬಿಗ್ ರಿಲೀಫ್ ದೊರೆತಂತಾಗಿದೆ.
ಕಳೆದ 2011ರಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ರೆಡ್ಡಿ ಕುಟುಂಬಕ್ಕೆ ಸೇರಿದ ಆಸ್ತಿ, ಹೆಲಿಕಾಪ್ಟರ್ ಸೇರಿದಂತೆ ಒಟ್ಟು 884 ಕೋಟಿ ರೂಪಾಯಿಗಳ ಆಸ್ತಿಯನ್ನು ಜಪ್ತಿ ಮಾಡಿದ್ದರು. ಇದೀಗ ಇಡಿ ಅಧಿಕಾರಿಗಳು ಮಾಡಿದ ಜಪ್ತಿ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ.