ಆತ್ಮಹತ್ಯೆಗೆ ಶರಣಾಗುವುದು ಒಂದು ಅಪರಾಧ, ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗುವ ಬದಲು, ಬದುಕಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕಿತ್ತು. ಅವರು ಬದುಕಿದ್ದಾಗಲೇ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬಹುದಿತ್ತು. ಆದರೆ, ಅವರು ಆತ್ಮಹತ್ಯೆಗೂ ಮುಂಚೆ ದ್ವೇಷದಿಂದ ನೀಡಿರುವ ಹೇಳಿಕೆಯಿಂದ ಸಚಿವರು ರಾಜೀನಾಮೆ ನೀಡುವುದು ಎಷ್ಟು ಸರಿ ಎಂದು ಪಶುಸಂಗೋಪನಾ ಸಚಿವ ಎ.ಮಂಜು ಪ್ರಶ್ನಿಸಿದ್ದಾರೆ.