ಬಾಲಕನ ಅಪಹರಿಸಿ 17 ಕೋಟಿಗೆ ಡಿಮ್ಯಾಂಡ್ ಮಾಡಿದ ಕಿಡ್ನಾಪರ್ ಗಳು

ಶುಕ್ರವಾರ, 18 ಡಿಸೆಂಬರ್ 2020 (09:15 IST)
ಮಂಗಳೂರು: ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ಬಾಲಕನನ್ನು ಅಪಹರಿಸಿದ ದುಷ್ಕರ್ಮಿಗಳು ಈಗ 17 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾರೆ.


ನಿನ್ನೆ ಸಂಜೆ 6.30 ರ ಸುಮಾರಿಗೆ ತಾತನ ಜತೆ ಆಟವಾಡುತ್ತಿದ್ದ 8 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಬಳಿಕ ಬಾಲಕನ ತಂದೆಗೆ 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾರೆ. ಹಳದಿ ಬಣ್ಣದ ಬೋರ್ಡ್ ಹೊಂದಿದ್ದ ಇಂಡಿಕಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಅಪಹರಿಸಿದ್ದಾರೆ. ಇದೀಗ ಬಾಲಕನ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ