ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರಾವತಿಯಲ್ಲಿ ಬಿಗಿ ಭದ್ರತೆ

ಶುಕ್ರವಾರ, 1 ಸೆಪ್ಟಂಬರ್ 2017 (16:46 IST)
ಶಿವಮೊಗ್ಗ: ಭದ್ರಾವತಿಯ ಹೊಸಮನೆಯಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಗಣಪತಿ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಿರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಭದ್ರಾವತಿಯಲ್ಲಿ ಭದ್ರತೆಗಾಗಿ ಎಸ್ಪಿ, ಒಬ್ಬರು ಎಎಸ್ಪಿ, 6 ಡಿಎಸ್ಪಿ, 12 ಸಿಪಿಐ, 28 ಪಿಎಸ್ಐ, 74 ಎಎಸ್ಐ, 197 ಹೆಡ್ ಕಾನ್ಸ್ಟೇಬಲ್, 650 ಪಿಸಿ, 4 ಕೆಎಸ್ಆರ್ಪಿ ಬೆಟಾಲಿಯನ್, 9 DAR, 2 ANS, 1 QRT, 1 DSWAT ಸೇರಿದಂತೆ ದಿವ್ಯದೃಷ್ಟಿ ವಾಹನ ಹಾಗೂ ಅಗ್ನಿವೇಷ್ ಕ್ಯಾಮೆರಾ ಸೇರಿದಂತೆ 2 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಾಳೆ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ ಸಹ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಎಸ್ಪಿ ಅಭಿನವ್ ಕರೆ ನೇತೃತ್ವದಲ್ಲಿ ಇಂದು ಪೊಲೀಸ್ ಸಿಬ್ಬಂದಿ ಜಾಗೃತ ಪಥಸಂಚಲನ ನಡೆಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ