ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲರು, ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎನ್ನುವ ಮೂಲಕ ಕರ್ನಾಟಕದ ಜನತೆಗೆ ಗಣತಂತ್ರದ ಶುಭಾಶಯ ಕೋರಿದ್ದಾರೆ. ಗಾಂಧೀಜಿ, ವಿವೇಕಾನಂದರು ದೇಶಕ್ಕಾಗಿ ಶ್ರಮಿಸಿದಂತವರು. ಇಂತಹ ಹಿರಿಯರ ಹಾದಿಯಲ್ಲಿ ನಾವು ಸಾಗಿ, ರಾಜ್ಯ ಮತ್ತು ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗೋಣ ಎಂದು ಕರೆ ನೀಡಿದ್ದಾರೆ.
ಅನೇಕತೆಯಲ್ಲಿ ಏಕತೆ ಕಂಡ ರಾಷ್ಟ್ರ ಭಾರತ. ಪ್ರಜಾಪ್ರಭುತ್ವ ಕೇವಲ ನಿಷ್ಪಕ್ಷಪಾತ ಚುನಾವಣೆ ಅಲ್ಲ. ಒಳ್ಳೆಯ, ಪ್ರಗತಿಪರ ಆಡಳಿತ, ಎಲ್ಲರನ್ನೊಳಗೊಂಡ ಆಡಳಿತವಾಗಿದೆ. ವಿಜ್ಞಾನ ತಂತ್ರಜ್ಞಾನ ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಭಾರತ ಅಭಿವೃದ್ಧಿ ಹೊಂದಿದೆ. ಭಾರತ ಅನೇಕತೆಯಲ್ಲಿ ಏಕತೆ ಪರಿಪಾಲಿಸುತ್ತಿರುವ ರಾಷ್ಟ್ರ. ವಿಜ್ಞಾನ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.
ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ. ನಾವು ಆರ್ಥಿಕ, ಸಾಮಾಜಿಕ, ವೈಜ್ಞಾನಿಕ ಕ್ಷೇತ್ರದಲ್ಲಿ ಮುನ್ನೆಡೆದಿದ್ದೇವೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಶ್ಲಾಘಿಸಿದ್ದಾರೆ. ಭೇಟಿ ಬಚಾವೋ, ಭೇಟಿ ಪಡಾವೋ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.