ಗೌರಿ ಲಂಕೇಶ್ ಹತ್ಯೆಗೂ, ಸಂಘ ಪರಿವಾರಕ್ಕೂ ಸಂಬಂಧವಿಲ್ಲ: ಬಿಎಸ್ ವೈ

ಸೋಮವಾರ, 11 ಸೆಪ್ಟಂಬರ್ 2017 (13:44 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಇಡೀ ರಾಜ್ಯವೇ ಖಂಡಿಸುತ್ತೆ. ಆದರೆ ಗೌರಿ ಲಂಕೇಶ್ ಹತ್ಯೆಗೂ, ಸಂಘ ಪರಿವಾರಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಘ ಪರಿವಾರದವರು ಗೌರಿ ಲಂಕೇಶ್ ಹತ್ಯೆ ಮಾಡಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಮಾಜಿ ನಕ್ಸಲರು ಆರೋಪಿಸಿದ್ದಾರೆ. ಆದರೆ ಪ್ರಕರಣಕ್ಕೂ ಸಂಘ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಇದೇವೇಳೆ ಗೌರಿ ಲಂಕೇಶ್ ಹತ್ಯೆಯನ್ನು ನಾವೂ ಸಹ ಖಂಡಿಸುತ್ತೇವೆ. ಹತ್ಯೆ ಮಾಡಿದ ಆರೋಪಿಗಳನ್ನ ಕೂಡಲೇ ಪತ್ತೆ ಹಚ್ಚಿ ಶಿಕ್ಷಿಸಲೇಬೇಕು ಬಿಎಸ್ ವೈ ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ