ಬೆಂಗಳೂರು: ಕೊಪ್ಪಳದಲ್ಲಿ ಇತ್ತೀಚೆಗೆ ವಾಲ್ಮೀಕಿ ಸಮುದಾಯದ ಯುವ ಮುಖಂಡ, ಹಿಂದೂ ಮುಖಂಡ ಗವಿಸಿದ್ದಪ್ಪ ನಾಯಕ ಅವರ ಬರ್ಬರ ಹತ್ಯೆ ಮಸೀದಿ ಮುಂದೆಯೇ ನಡೆದಿದೆ. ಗವಿಸಿದ್ದಪ್ಪ ನಾಯಕ ಅವರ ಆತ್ಮಕ್ಕೆ ಶಾಂತಿ ಲಭಿಸುವ ಸಲುವಾಗಿ ರಾಜ್ಯ ಸರಕಾರವು ಈ ಪ್ರಕರಣದ ತನಿಖೆಯನ್ನು ಎನ್.ಐ.ಎಗೆ ವಹಿಸಬೇಕು ಅಥವಾ ಸಿ.ಬಿ.ಐ.ಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ಈ ಘಟನೆಯನ್ನು ಹಗುರವಾಗಿ ಪರಿಗಣಿಸಬಾರದು ಎಂದು ಹೇಳಿದರು. ಈ ಹತ್ಯೆಯಿಂದ ಇಡೀ ಕೊಪ್ಪಳ ಜಿಲ್ಲೆಯಲ್ಲಿ ಆತಂಕ ಉಂಟಾಗಿದೆ ಎಂದು ವಿವರಿಸಿದರು. ಕೊಲೆಗಡುಕರು, ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ಸಮಾಜಘಾತುಕ ಶಕ್ತಿಗಳು, ದೇಶದ್ರೋಹಿಗಳ ಚಟುವಟಿಕೆ ಹಿಂದೆ ಕರಾವಳಿ ಭಾಗದಲ್ಲಿತ್ತು. ಈಗ ಹಿಂದೂ ಕಾರ್ಯಕರ್ತರ ಹತ್ಯೆಯು ಕೊಪ್ಪಳ ಜಿಲ್ಲೆಗೂ ವಿಸ್ತರಣೆ ಆಗಿದೆ. ಇದು ಖಂಡನೀಯ ಎಂದು ತಿಳಿಸಿದರು.