ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿ ಗೀತಾ ಮಹದೇವ ಪ್ರಸಾದ್

ಶುಕ್ರವಾರ, 1 ಫೆಬ್ರವರಿ 2019 (15:18 IST)
ಕರ್ನಾಟಕ ರಾಜ್ಯದ ಕಾಂಗ್ರೆಸ್ ಪ್ರಚಾರ ಸದಸ್ಯರಾಗಿ ಮಾಜಿ ಸಚಿವೆ ಗೀತಾ ಮಹದೇವ ಪ್ರಸಾದ್ ನೇಮಕಗೊಂಡಿದ್ದಾರೆ.  

ಕರ್ನಾಟಕ ರಾಜ್ಯದ ಕಾಂಗ್ರೆಸ್ ಪ್ರಚಾರ ಸಮಿತಿಯಲ್ಲಿ 63 ಜನ ಸದಸ್ಯರನ್ನು ನೇಮಕ‌ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಈ ಸಮಿತಿಯನ್ನು ನೇಮಕ ಮಾಡಿದ್ದಾರೆ.

ಸಮಿತಿಗೆ ಗೀತಾ ಮಹದೇವಪ್ರಸಾದ್ ರವರು ನೇಮಕವಾಗಿರುವುದು, ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಹಾಗೂ ದಿ.ಮಹದೇವಪ್ರಸಾದ್ ಅಭಿಮಾನಿಗಳಿಗೆ ಸಂತಸ ಉಂಟುಮಾಡಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ