ಭ್ರಷ್ಟ ಸರಕಾರವನ್ನು ಕಿತ್ತೊಗೆಯಿರಿ: ಸಿಎಂ ವಿರುದ್ಧ ಅಮಿತ್ ಶಾ ವಾಗ್ದಾಳಿ

ಶನಿವಾರ, 12 ಆಗಸ್ಟ್ 2017 (12:44 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದಾರೆ.
ನಗರಕ್ಕೆ ಇಂದು ಮೂರು ದಿನಗಳ ಪ್ರವಾಸಕ್ಕಾಗಿ ಆಗಮಿಸಿದ ಶಾ ಮಾತನಾಡಿ, ಮುಂಬರುವ ಚುನಾವಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದು ತಿಳಿಸಿದ್ದಾರೆ.
 
ಬಿಜೆಪಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಕೋರಿದರು.
 
ಕೇಂದ್ರದಲ್ಲಿ ಪ್ರಧಾನಿ ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ಹಲವು ರಾಜ್ಯಗಳಲ್ಲಿ ಜಯಗಳಿಸಿದ್ದೇವೆ. ಅದರಂತೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ