ಗೋವಾ ಸಿಎಂ ಮನೋಹರ್ ಪರಿಕ್ಕರ್‍‌ಗೆ ಕನ್ನಡ ಸಂಘಟನೆಗಳ ಧಿಕ್ಕಾರ

ಬುಧವಾರ, 27 ಸೆಪ್ಟಂಬರ್ 2017 (14:57 IST)
ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ಧ್ವಂಸಗೊಳಿಸಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿವೆ.
ಗೋವಾ ಸರಕಾರ ಸದಾ ಕನ್ನಡಿಗರ ವಿರುದ್ಧ ದ್ವೇಷ ಸಾಧಿಸುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಮುಂದೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಸಿವೆ.
 
ಮಹಾದಾಯಿ ನದಿ ನೀರು ವಿವಾದಕ್ಕೆ ಕೂಡಾ ಗೋವಾ ಸರಕಾರ ಸ್ಪಂದಿಸದಿರುವುದು ಕನ್ನಡಿಗರಲ್ಲಿ ಭಾರಿ ಅಸಮಾಧಾನ ಮೂಡಿಸಿದೆ. ಬಿಜೆಪಿ ನಾಯಕರು ಗೋವಾದಲ್ಲಿರುವ ಬಿಜೆಪಿ ಸರಕಾರದ ಮನವೊಲಿಸುವಲ್ಲಿ ವಿಫಲವಾಗಿದ್ದಾರೆ ಎಂದು ಮಹದಾಯಿ ಹೋರಾಟಗಾರರು ಕಿಡಿಕಾರಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋವಾ ಸರಕಾರಕ್ಕೆ ಸ್ಟ್ರಾಂಗ್ ಪತ್ರ ಬರೆಯುವುದಾಗಿ ತಿಳಿಸಿದ್ದರೂ ಕನ್ನಡಿಗರ ಆಕ್ರೋಶ ಮುಂದುವರಿದಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ