ಕೊರೊನಾ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಆರೋಗ್ಯ ಸಚಿವ

ಮಂಗಳವಾರ, 29 ಸೆಪ್ಟಂಬರ್ 2020 (18:44 IST)
ಡೆಡ್ಲಿ ಕೊರೊನಾ ವೈರಸ್ ಬಗ್ಗೆ ರಾಜ್ಯ ಸರಕಾರ ಜನತೆಗೆ ಗುಡ್ ನ್ಯೂಸ್ ಕೊಟ್ಟಿದೆ.

ಸುಮಾರು 5 ಲಕ್ಷದಷ್ಟು  ಕೋವಿಡ್ ಸೋಂಕಿತರು ರಾಜ್ಯದಲ್ಲಿ ಈವರೆಗೆ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಸಚಿವ ಬಿ. ಶ್ರೀರಾಮುಲು ಮೊಳಕಾಲ್ಮೂರಿನಲ್ಲಿ ಹೇಳಿದ್ದಾರೆ.

ಜನರಲ್ಲಿ ಕೊರೊನಾ ತಡೆ ಕುರಿತು ಜಾಗೃತಿ ಮೂಡಿದ್ದು, ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುತಿದ್ದಾರೆ. ಕೋವಿಡ್ ಸೋಂಕಿಗೆ ಲಸಿಕೆ ಸಿಗೋವರೆಗೂ  ಜನರು ಜಾಗೃತರಾಗಿರುವುದು ಒಂದೇ ಪರಿಹಾರ ಎಂದು ಶ್ರೀರಾಮುಲು ಹೇಳಿದ್ದಾರೆ.

ಕಳೆದ ಬಜೆಟ್ ನಲ್ಲಿ ಅತೀ ಹೆಚ್ಚು ಹಣ ಆರೋಗ್ಯ ಇಲಾಖೆ ಪಡೆದು ಅಭಿವೃದ್ದಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ