ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

Sampriya

ಗುರುವಾರ, 23 ಅಕ್ಟೋಬರ್ 2025 (17:06 IST)
Photo Credit X
ಬೆಂಗಳೂರು: ಹುಬ್ಬಳ್ಳಿ ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಪತ್ರವನ್ನು ನೀಡಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. 

ಈ ಬಗ್ಗೆ ಪ್ರಹ್ಲಾದ್ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ನಮ್ಮ ಹುಬ್ಬಳ್ಳಿ-ಧಾರವಾಡ ಮೂಲಕ  ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಪತ್ರವನ್ನು ನೀಡಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್  ಅವರಿಗೆ ಅನಂತ ಧನ್ಯವಾದಗಳು.


ನಮ್ಮ ಬಹುದಿನದ ಬೇಡಿಕೆಯಾಗಿದ್ದ  ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗವಾಗಿ ವಾಣಿಜ್ಯ ನಗರಿ ಮುಂಬೈಗೆ   ಸಂಚಾರಿಸಲಿದ್ದು, ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ‌ ಹಾಗೂ ವ್ಯಾಪಾರ‌ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ. 

ಈ ಹೊಸ ರೈಲು ಪ್ರಾರಂಭಿಸಲು ಅನುವು ಮಾಡಿಕೊಟ್ಟ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು @narendramodi
 ಮತ್ತು ಆತ್ಮೀಯ ಸಹೋದ್ಯೋಗಿ ಮಿತ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ @VSOMANNA_BJP
 ಅವರಿಗೆ ಅನಂತ ಧನ್ಯವಾದಗಳು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ