ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್

ಶುಕ್ರವಾರ, 18 ಸೆಪ್ಟಂಬರ್ 2020 (21:47 IST)
ಸ್ವಂತ ಉದ್ಯೋಗ ಮಾಡುವ ಯುವಜನತೆಗೆ ಗುಡ್ ನ್ಯೂಸ್ ಇದಾಗಿದೆ.

2020-21 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ  ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಯಾಗಿ ಮನೆಯ ಹಿತ್ತಲಿನಲ್ಲಿ ಪೌಷ್ಠಿಕ ತೋಟ ಅಭಿವೃದ್ಧಿ ಕಾರ್ಯಕ್ರಮದಡಿ ಪೌಷ್ಠಿಕ ತೋಟ ನಿರ್ಮಿಸಿಕೊಳ್ಳಬಹುದು.

ಎನ್‌ಆರ್‌ಎಲ್‌ಎಂ ಒಗ್ಗೂಡಿಸುವಿಕೆಯಡಿ ಸಮುದಾಯ ಆಧಾರಿತ ಕಾಮಗಾರಿಯಾಗಿ ಸ್ವ-ಸಹಾಯ ಗುಂಪುಗಳಿಗೆ ಅಣಬೆ ಕೃಷಿ ಶಡ್ ನಿರ್ಮಾಣ ಮಾಡಿಕೊಳ್ಳಬಹುದು.
 ಆಸಕ್ತ ರೈತರು ಹಾಗೂ ಸ್ವ-ಸ್ವಹಾಯ ಗುಂಪುಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಗದಗ  ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹೀಗಂತ ಗದಗ ತೊಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಕಾಂತ್ ಕೋಟಿಮನಿ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ