ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಗೋಪಾಲಯ್ಯ

ಶುಕ್ರವಾರ, 22 ನವೆಂಬರ್ 2019 (11:22 IST)
ಬೆಂಗಳೂರು : ಒಕ್ಕಲಿಗರ ಮತ ಒಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾನು ಹಾಗೂ ಸದಾನಂದಗೌಡ ಇಬ್ಬರೂ ಒಕ್ಕಲಿಗರು. ಮಾಜಿ ಸಿಎಂ ಕುಮಾರಸ್ವಾಮಿಗೆ ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಟಾಂಗ್ ನೀಡಿದ್ದಾರೆ.




ಇಂದು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಮಾಜಿ ಸಿಎಂಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಪ್ರಚಾರ ಕಾರ್ಯ ನಡೆಸಲಿದ್ದಾರೆ.


ಈ ಬಗ್ಗೆ ಮಾತನಾಡಿದ ಗೋಪಾಲಯ್ಯ, ಒಕ್ಕಲಿಗರ ಮತ ಒಡೆಯಲು ಯಾರಿಂದಲೂ ಸಾಧ್ಯವಿಲ್ಲ . ನಾನು ಮಾಡಿದ ಅಭಿವೃದ್ಧಿ ಕೆಲಸ ನನ್ನ ಕೈ ಹಿಡಿಯುತ್ತದೆ. ಹೆಚ್ಚು ಅಂತರದ ಗೆಲುವು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ