ಬಿಜೆಪಿ ಸದಸ್ಯರು ಸಚಿವ ಸಂಪುಟದಲ್ಲಿರುವ ಕಳಂಕಿತ ಸಚಿವರ ಬಗ್ಗೆ ಚರ್ಚಿಸಲು ಅವಕಾಱ ನೀಡಬೇಕೆಂದು ಸದನದ ಬಾವಿಗಿಳಿದು ಪ್ರತಿಭಟಿಸುತ್ತಿದ್ದರೆ, ಜೆಡಿಎಸ್ ಶಾಸಕರು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದರು. ಇದರಿಂದ ಸದನದಲ್ಲಿ ಗದ್ದಲ ಸೃಷ್ಟಿಯಾಗಿತ್ತು. ಇದರ ನಡುವೆಯೇ ಸರ್ಕಾರ ಈ ಎರಡು ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಿತು.