ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬ ದಿನವಾದ ಶುಕ್ರವಾರ ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಕೃಷಿ ಮತ್ತು ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿ ಕೃಷಿ ಮತ್ತು ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ಸಂಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಳೆದ ವರ್ಷ 6.11 ಲಕ್ಷ ರೈತರಿಗೆ 7,135 ಕೋಟಿ ರೂ. ಪಾವತಿ ಮಾಡಲಾಗಿದೆ. ಈ ಬಾರಿ 7 ಲಕ್ಷ ರೈತರಿಂದ ಖರೀದಿ ಮಾಡಲಿದ್ದೇವೆ ಎಂದಿದ್ದಾರೆ.
ಸೆಪ್ಟೆಂಬರ್ನಿಂದಲೇ ನೋಂದಣಿ ಕಾರ್ಯ ಪ್ರಾರಂಭ ಮಾಡಲಿದ್ದೇವೆ. ಖರೀದಿಯನ್ನು ಜನವರಿಯಿಂದ ಪ್ರಾರಂಭ ಮಾಡಿಲಿದ್ದೇವೆ. ಮುಂದಿನ ಮಾರ್ಚ್ವರೆಗೂ ಉತ್ಪನ್ನಗಳ ಖರೀದಿ ಮಾಡಲಿದ್ದೇವೆ. ₹4,846 ಕ್ವಿಂಟಲ್ ರಾಗಿ ಖರೀದಿ ಮಾಡಲಿದ್ದೇವೆ. ಈ ಬಾರಿ ₹ 596 ಹೆಚ್ಚಳ ಮಾಡಿದ್ದೇವೆ. ಒಬ್ಬರಿಂದ ಹೆಚ್ಚು ಅಂದ್ರೆ 50 ಕ್ವಿಂಟಲ್ ಖರೀದಿ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ರೈತರಿಂದ 3 ಲಕ್ಷ ಮೆಟ್ರಿಕ್ ಟನ್ ಜೋಳ ಖರೀದಿ ಮಾಡುತ್ತೇವೆ. ಪ್ರತಿ ಕ್ವಿಂಟಲ್ ಜೋಳಕ್ಕೆ ಈ ವರ್ಷ ₹ 2369 ಕೊಡುತ್ತೇವೆ. ಈ ವರ್ಷ ₹ 69 ಹೆಚ್ಚುವರಿಯಾಗಿ ಜೋಳಕ್ಕೆ ಕೊಡುತ್ತಿದ್ದೇವೆ. ಭತ್ತವನ್ನು ಬೆಂಬಲ ಬೆಲೆ ಕೊಟ್ಟು ಖರೀದಿ ಮಾಡುತ್ತೇವೆ ಎಂದು ತಿಳಿಸಿದರು.
ನೇರವಾಗಿ ರೈತರಿಗೆ ಅನುಕೂಲವಾಗುವಂತೆ ಮಾಡುತ್ತಿದ್ದೇವೆ. ಸಿರಿಧಾನ್ಯಗಳಿಗೂ ಬೆಂಬಲ ಬೆಲೆಕೊಟ್ಟು ಖರೀದಿ ಮಾಡುತ್ತಿದ್ದೇವೆ. ರಾಗಿಗೆ ಇರುವ ಬೆಲೆಯನ್ನೇ ಸಿರಿಧಾನ್ಯಗಳಿಗೆ ಕೊಡಲಿದ್ದೇವೆ. ಸಿರಿಧಾನ್ಯಗಳಿಗೆ ಹೆಚ್ಚುವರಿಯಾಗಿ ₹ 114 ಕೊಡುವ ಬಗ್ಗೆ ಆರ್ಥಿಕ ಇಲಾಖೆಗೆ ಪ್ರಸ್ತಾಪ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.