ಹಾವೇರಿಯ ಕ್ರೀಡಾಂಗಣದಲ್ಲಿ ನಡೆದ ರೈತ ಚೈತನ್ಯ ಯಾತ್ರೆಯಲ್ಲಿ ಪಾಲ್ಗೊಂಡ ಅವರು, ಸರಕಾರ ರೈತರಿಗೆ ಶಾಶ್ವತವಾಗಿ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತರಬೇಕು. ರಾಜ್ಯ ಸರಕಾರ ರೈತರ ಆತ್ಮಹತ್ಯೆಗೆ ಕಾರಣಗಳನ್ನು ಹುಡುಕುತ್ತಿದೆ ಎಂದು ಲೇವಡಿ ಮಾಡಿದರು.
ಬ್ಯಾಂಕ್ಗಳು, ಲೇವಾದೇವಿ ಉದ್ಯಮಿಗಳು ರೈತರು ಸಾಲ ಮರುಪಾವತಿಸುವಂತೆ ಒತ್ತಾಯಿಸುತ್ತಿವೆ. ಬೆಳೆಯನ್ನೇ ಬೆಳೆಯದ ರೈತ ಸಾಲವನ್ನು ಮರುಪಾವತಿಸಲು ಹೇಗೆ ಸಾಧ್ಯ. ಸರಕಾರ ಬ್ಯಾಂಕ್ ಮತ್ತು ಮೀಟರ್ ಬಡ್ಡಿ ದಂಧೆಕೋರರ ವಿರುದ್ಧ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.