ಮೇಕೆದಾಟು ವಿಳಂಬ ಸರಕಾರ ಹೊಣೆ - ಡಿ. ಕೆ. ಶಿವಕುಮಾರ್

ಸೋಮವಾರ, 8 ನವೆಂಬರ್ 2021 (18:20 IST)
ಬಿಜೆಪಿ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಆರಂಭಿಸುವ ಆಸಕ್ತಿ ಕಾಣುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೇಂದ್ರ-ರಾಜ್ಯದ ಡಬಲ್ ಎಂಜಿನ್ ಬಿಜೆಪಿ ಸರ್ಕಾರಗಳು, ಮೇಕೆದಾಟು ಯೋಜನೆ ಆರಂಭಿಸಲು ಹೆಚ್ಚಿನ ಆಸಕ್ತಿ ತೋರುತ್ತಿಲ್ಲ.ಕಾನೂನಿನ ಯಾವುದೇ ಅಡೆತಡೆ ಇಲ್ಲವಾದರೂ ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕರ್ನಾಟಕದ ಪಾಲಿಗೆ ಸಿಗಬೇಕಾದ ಕಾವೇರಿ ನೀರು ಸಮುದ್ರದ ಪಾಲಾಗಿ, ಪೋಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ