ರೌಡಿಶೀಟರ್ ನಾಗನನ್ನು ಸರಕಾರವೇ ರಕ್ಷಿಸುತ್ತಿದೆ: ಶೋಭಾ ಕರಂದ್ಲಾಜೆ

ಬುಧವಾರ, 10 ಮೇ 2017 (16:08 IST)
ರೌಡಿಶೀಟರ್ ನಾಗನನ್ನು ಸರಕಾರವೇ ರಕ್ಷಿಸುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
 
ರೌಡಿಶೀಟರ್ ನಾಗ ಈಗಾಗಲೇ ಹಲವಾರು ರಾಜಕೀಯ ನಾಯಕರ ಹೆಸರುಗಳನ್ನು ಬಹಿರಂಗಪಡಿಸಿದ್ದಾನೆ. ನಾಗನ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
 
ಪ್ರಕರಣ ಸಿಬಿಐಗೆ ವಹಿಸಿದಲ್ಲಿ ನಾಗನ ಹಿಂದೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಇತರ ನಾಯಕರ ಕೈವಾಡ ಬಯಲಿಗೆ ತರಬಹುದಾಗಿದೆ ಎಂದರು,
 
ಕಳೆದ ಹಲವು ದಿನಗಳಿಂದ ನಾಗ ಬೆಂಗಳೂರಿನಲ್ಲಿಯೇ ಇದ್ದರೂ ಪೊಲೀಸರು ಯಾಕೆ ಬಂಧಿಸುತ್ತಿಲ್ಲ? ಯಾರನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿದೆ? ಎಂದು ಸರಕಾರದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ