ಹಂಸರಾಜ್ ಭಾರದ್ವಾಜ್ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿದ್ದರು. ಜತೆಗೆ ಆಡಳಿತ ವೈಖರಿ ಬಗ್ಗೆ ಸಾರ್ವಜನಿಕವಾಗಿ ಟೀಕಿಸಿ, ಚಾಟಿ ಬೀಸುವ ಕೆಲಸ ಮಾಡುತ್ತಿದ್ದರು. ವಿಶೇಷ ಎಂದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದಮೇಲೂ ಅವರು ಆಗಾಗ್ಗೆ ಸರ್ಕಾರಕ್ಕೆ ಚಾಟಿ ಏಟು ನೀಡುತ್ತಲೇ ಇದ್ದಾರೆ.
ಕಾಂಗ್ರೆಸ್ ಸರ್ಕಾರದ ಪಾಲಿಗೂ ಭಾರವಾಗಿದ್ದ ಭಾರದ್ವಾಜ್ ಅವರು ರಾಜೀನಾಮೆ ನೀಡುತ್ತಿರುವುದು ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಸಹೋದ್ಯೋಗಿಗಳಿಗೆ ಸಂತಸದ ವಿಚಾರ. ಆದರೆ, ಮುಂದೆ ನೇಮಕವಾಗುವ ರಾಜ್ಯಪಾಲರು ಮಗ್ಗುಲ ಮುಳ್ಳಾಗುವುದಿಲ್ಲ ಎಂದು ಹೇಳಲಾಗದು.