ಗಾಂಧಿ ಪ್ರತಿಮೆ ನೋಡಿಯಾದ್ರೂ ಸರ್ಕಾರ ನಿದ್ರೆಯಿಂದ ಏಳಲಿ ಎಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಗಾಂಧೀಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕಾಗೋಡು ತಿಮ್ಮಪ್ಪ ಹೇಳಿದರು. ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮೇಲಿನ ಮಾತನ್ನು ಉಚ್ಚರಿಸಿದರು. ಸರ್ಕಾರ ಎಚ್ಚೆತ್ತುಕೊಳ್ಳದಿರುವ ಬಗ್ಗೆ ಮತ್ತು ಅದರ ಕಾರ್ಯವೈಖರಿ ಬಗ್ಗೆ ಕಾಗೋಡು ಛಾಟಿ ಬೀಸಿದರು. ರಾಜ್ಯಸರ್ಕಾರ ಗಾಢ ನಿದ್ರೆಯಲ್ಲಿದೆ. ಈ ಗಾಂಧಿ ಪ್ರತಿಮೆಯನ್ನು ನೋಡಿಯಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಲಿ ಎಂದು ಚುಚ್ಚಿದರು.