ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ ಲೇ ಔಟ್ನಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ದರ್ಶನ್ ಮನೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಮಾಲೀಕತ್ವದ ಎಸ್.ಎಸ್ ಆಸ್ಪತ್ರೆ ತೆರವಿಗೆ ವಿಶೇಷ ಜಿಲ್ಲಾಧಿಕಾರಿ ಅಕ್ಟೋಬರ್ 1 ರಂದು ಆದೇಶ ಹೊರಡಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿ. ಶಂಕರ್ ಮಾಹಿತಿ ನೀಡಿದ್ದಾರೆ.
ರಾಜಕಾಲುವೆ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಲಾಗಿರುವ ದರ್ಶನ್ ಮತ್ತು ಶಿವಶಂಕರಪ್ಪ ಅವರಿಗೆ ಸೇರಿದ ಕಟ್ಟಡಗಳ ಸ್ವಯಂ ತೆರವು ಆದೇಶ ಹೊರಡಿಸಲು ಈಗಾಗಲೇ ವಿಶೇಷ ಜಿಲ್ಲಾಧಿಕಾರಿ ಹೇಮೋಜಿ ನಾಯಕ್ ಅವರಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ತಹಶೀಲ್ದಾರ್ ವರದಿಯನ್ನು ಸಿದ್ಧಪಡಿಸಿದ್ದು ಅಕ್ಟೋಬರ್ 1 ರಂದು ನಾಯಕ್ ಆದೇಶ ಹೊರಡಿಸಲಿದ್ದಾರೆ ಎಂದು ವಿ. ಶಂಕರ್ ಹೇಳಿದ್ದಾರೆ.