ನಾಡಿನಾದ್ಯಂತ ಗೌರಿ, ಗಣೇಶ ಹಬ್ಬದ ಸಂಭ್ರಮ, ಸಡಗರಗಳು ಮನೆಮಾಡಿದೆ. ಮನೆ, ಮನೆಗಳಲ್ಲಿ ರಂಗೋಲಿ ಬಿಡಿಸಿ, ತಳಿರು ತೋರಣ ಕಟ್ಟಿದ್ದಾರೆ. ಗೌರಿ ಮೂರ್ತಿಗೆ ಹೂವಿನ ಅಲಂಕಾರ ಮಾಡಿ ಬಾಗಿನ ಸಿದ್ದಪಡಿಸಿ, ಭಕ್ತಿಯಿಂದ ಪೂಜೆ ಸಲ್ಲಿಸಿದರು.
ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಮುತ್ತೈದೆಯರು ದೇವರಿಗೆ ಬಾಗೀನ ಅರ್ಪಿಸಿದರು.ಗೌರಿ ಗಣೇಶ್ ಹಬ್ಬಕ್ಕೆ ಹೂವು, ಹಣ್ಣು ಖರೀದಿಗೆ ತೆರಳಿದ ಗ್ರಾಹಕರಿಗೆ ಹಬ್ಬದ ಬಿಸಿ ತಟ್ಟಿದೆ. ಹೂವು, ಹಣ್ಣುಗಳ ಬೆಲೆ ಸಾಮಾನ್ಯ ದಿನಗಳಿಗಿಂತ ಹೆಚ್ಚಾಗಿದೆ.