ಕೋಲಾರ್ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೋರ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸುಬ್ರಮಣಿ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು ಇವರು ಮುಳಬಾಗಿಲು ತಾಲ್ಲೂಕಿನ ಬಲ್ಲಾ ಗ್ರಾಮ ಪಂಚಾಯತ್ನಲ್ಲಿ ಕಣಕ್ಕಿಳಿದಿದ್ದರು. ಅವರು ಗ್ರಾಮ್ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಅವರನ್ನು ಕೊಲೆಗೈಯ್ಯಲಾಗಿದೆ ಎಂದು ಶಂಕಿಸಲಾಗಿದೆ.
ಸುಬ್ರಮಣಿ ಕೊಲೆಯಿಂದ ಉದ್ರಿಕ್ತರಾಗಿರುವ ಅವರ ಬೆಂಬಲಿಗರು ಪ್ರತಿಸ್ಪರ್ಧಿ ಅನಿತಾ ಅವರ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಎರಡು ಮನೆಗಳನ್ನು ಸಂಪೂರ್ಣ ಕೆಡವಲಾಗಿದ್ದು, 5 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮನೆ ಮುಂದೆ ನಿಂತಿದ್ದ ಟ್ರಾಕ್ಟರ್ ಮತ್ತು ಆಟೋ ಮತ್ತು ಹಲವು ವಸ್ತುಗಳನ್ನು ಸುಟ್ಟು ಹಾಕಲಾಗಿದೆ.