ಇಂದು ಸಿಎಂಗಳ ಜೊತೆ ಮಹತ್ವದ ಸಭೆ

ಮಂಗಳವಾರ, 14 ಡಿಸೆಂಬರ್ 2021 (08:10 IST)
ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಿಎಂಗಳ ಜೊತೆ ಮಹತ್ವದ ಸಭೆ ನಡೆಯಲಿದೆ. 12 ರಾಜ್ಯಗಳ ಸಿಎಂಗಳು, 9 ಡಿಸಿಎಂಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
 
ಸಿಎಂ ಬಸವರಾಜ ಬೊಮ್ಮಾಯಿ, ಅರುಣಾಚಲಪ್ರದೇಶ, ಅಸ್ಸಾಂ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಮಧ್ಯಪ್ರದೇಶ, ತ್ರಿಪುರಾ, ಮಣಿಪುರ, ಉತ್ತರ ಪ್ರದೇಶ, ಉತ್ತರಾಖಂಡ್ ಮುಖ್ಯಮಂತ್ರಿ ಇಂದಿನ ಸಭೆಯಲ್ಲಿ ಭಾಗಿಯಾಗುತ್ತಾರೆ. ವಾರಾಣಸಿಯ ವಿಶ್ವನಾಥನ ಸನ್ನಧಿಯಲ್ಲಿ ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಗಲಿದೆ.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭಾಗಿ ರಾಜ್ಯಗಳ ಅಭಿವೃದ್ಧಿ, ಯೋಜನಾ ಅನುಷ್ಠಾನ, ಕೊರೊನಾ ನಿಯಂತ್ರಣ, ಆಡಳಿತದಲ್ಲಿ ಪಾರದರ್ಶಕತೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ