ಮೈಸೂರಿನಲ್ಲಿ ವೀರ್ ಸಾವರ್ಕರ್ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ

ಮಂಗಳವಾರ, 23 ಆಗಸ್ಟ್ 2022 (18:08 IST)
ಯಾರೇನೆ ಹೇಳಿದರೂ ವೀರಸಾವರ್ಕರ್ ಅಪ್ರತಿಮ'ಮೈಸೂರಿನಲ್ಲಿ ವೀರ್ ಸಾವರ್ಕರ್ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ವೀರ ಸಾವರ್ಕರ್ ಪ್ರತಿಷ್ಠಾನ ಆಯೋಜಿಸಿರುವ ಸಾವರ್ಕರ್ ರಥ ಯಾತ್ರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿ, ಯಾರು ಏನೇ ಹೇಳಿದರೂ ವೀರ ಸಾವರ್ಕರ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ. ದೇಶ ಪ್ರೇಮಿಯ ಕುರಿತು ಜನರಿಗೆ ಸಂದೇಶ ನೀಡುವ ದೃಷ್ಟಿಯಿಂದ ಈ ರಥ‌ಯಾತ್ರೆ ನಡೆಯಲಿದೆ ಎಂದಿದ್ದಾರೆ. ಇನ್ನು, ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಮಾತನಾಡಿ ನಾನು ಮತ್ತು ಸಿಎಂ ಈಗಾಗಲೇ ಕ್ಷಮೆ ಕೇಳಿದ್ದೇವೆ. ಆ ನಂತರವೂ ಸಿದ್ದರಾಮಯ್ಯ ಹಠಮಾರಿ ಧೋರಣೆ ಬಿಡಬೇಕು. ಆಗಸ್ಟ್​​ 26ರಂದು ಕೊಡಗಿಗೆ ಪಾದಯಾತ್ರೆ ಕಾರ್ಯಕ್ರಮ ನಡೆಸುತ್ತಿರುವುದು ಕೆಟ್ಟ ಬೆಳವಣಿಗೆ ಎಂದು ಅಸಮಾಧಾನ ಹೊರಹಾಕಿದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ