ಎರಡು ತಿಂಗಳಿನಿಂದ ಯಜಮಾನಿ ಖಾತೆಗೆ ಬಾರದ ಗೃಹಲಕ್ಷ್ಮೀ, ಏನಂದ್ರು ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಸರಿಯಾಗಿ ಜಮಾ ಆಗುತ್ತಿತ್ತು.
ಆದರೆ ಮೇ ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ಬಂದಿಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆಗಾಗ ಆರೋಪ ಕೇಳಿಬಂದಿತ್ತು. ಇದೀಗ ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿ 2ತಿಂಗಳ ಬಾಕಿ ಹಣವನ್ನು 10ದಿನಗಳೊಳಗೆ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಭರವಸೆ ನೀಡಿದರು.