ನಿಶ್ಚಿತಾರ್ಥ ಮಾಡಿಕೊಂಡ ಯುವಕ ಆತ್ಮಹತ್ಯೆ

ಬುಧವಾರ, 30 ಮಾರ್ಚ್ 2022 (09:50 IST)
ಚಿಕ್ಕಬಳ್ಳಾಪುರ: ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ನಿಶ್ಚಿತಾರ್ಥ ನಡೆದ ಮೂರೇ ದಿನಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುನಿಕೃಷ್ಣ ಎಂಬಾತನಿಗೆ ಮೊನ್ನೆಯಷ್ಟೇ ವಿವಾಹ ನಿಶ್ಚಿತಾರ್ಥವಾಗಿತ್ತು. ಆದರೆ ರಕ್ತದಲ್ಲಿ ತನ್ನ ಪ್ರೇಯಸಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿವಾಹಿತ ಸ್ತ್ರೀಯೊಬ್ಬರೊಂದಿಗೆ ಮುನಿಕೃಷ್ಣಗೆ ಸಂಬಂಧವಿತ್ತು ಎನ್ನಲಾಗಿದೆ.

ಸಾವಿನ ಬಳಿಕ ಆತನ ಮೊಬೈಲ್ ಪರಿಶೀಲಿಸಿದಾಗ ಅನ್ಯ ಮಹಿಳೆಯೊಂದಿಗಿನ ಸಂಬಂಧ ಬಯಲಾಗಿದೆ. ಸಾವಿಗೆ ಮುನ್ನ ಆಕೆಗೆ ರಕ್ತದಲ್ಲಿ ಪತ್ರ ಬರೆದು ಕ್ಷಮೆ ಕೋರಿದ್ದಾನೆ. ಬೇರೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ಪ್ರೇಯಸಿ ಬೆದರಿಕೆ ಹಾಕಿದ್ದಳು ಎನ್ನಲಾಗಿದೆ. ಇದೀಗ ಮುನಿಕೃಷ್ಣ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ