ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

Sampriya

ಗುರುವಾರ, 19 ಜೂನ್ 2025 (16:47 IST)
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕಕರಣೆ ಮಾಡುವುದಿಲ್ಲ. ಈ ಹಿಂದೆಯಿದ್ದ ವ್ಯವಸ್ಥೆಯೇ ಮುಂದಿನ ದಿನಗಳಲ್ಲಿಯೂ ಮುಂದುವರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮಿ ಹಣ ವಿಳಂಬದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ‌ಇಲ್ಲ. ಏಪ್ರಿಲ್ ತಿಂಗಳವರೆಗೂ ಹಣ ಕ್ಲಿಯರ್ ಆಗಿದೆ. ಮೇ ತಿಂಗಳು ಮಾತ್ರ ಬಾಕಿ ಇದ್ದು ಪ್ರತಿ‌ ತಿಂಗಳು ಹಣಕಾಸು ‌ಇಲಾಖೆಗೆ ಹಣ ಬಿಡುಗಡೆ ಆಗುತ್ತಿದೆ ಎಂದರು. 

ಈಗ ಹಣ ತಾಲೂಕು, ಜಿಲ್ಲಾ ಪಂಚಾಯತಿಗೆ ಸುತ್ತಾಡಿ ಬಿಡುಗಡೆ ಆಗಬೇಕಿದೆ. ಇದರಿಂದಾಗಿ ಒಂದು ವಾರ, ಎರಡು ವಾರ ತಡೆ ಆಗಬಹುದು ಅಷ್ಟೇ. ಬಾಕಿ ಹಣ ಬಿಡುಗಡೆ ಮಾಡುತ್ತೇವೆ  ಎಂದು ತಿಳಿಸಿದರು.

ಪ್ರತಿ ತಿಂಗಳು ಹಣಕಾಸು ‌ಇಲಾಖೆ ಹಣ ಬಿಡುಗಡೆ ಮಾಡುತ್ತಿದೆ. ಪ್ರತಿ ತಿಂಗಳು ಯಜಮಾನಿಯರು ಹೊಸದಾಗಿ ಸೇರುತ್ತಿದ್ದಾರೆ. ಈಗ 1.25 ಕೋಟಿ ಯಜಮಾನಿಯರು ಯೋಜನೆ ಅಡಿ ಇದ್ದಾರೆ. ನಮ್ಮ ಇಲಾಖೆಯಿಂದ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಹೇಗೆ ಇದೆಯೋ ಹಾಗೆಯೇ ಮುಂದುವರೆಯುತ್ತಿದೆ‌ ಅಂತ ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ