ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದ ಜಿ.ಟಿ.ದೇವೆಗೌಡ

ಬುಧವಾರ, 12 ಜುಲೈ 2023 (19:51 IST)
ಅನ್ನಭಾಗ್ಯ ಯೋಜನೆ ಪರವಾಗಿ ಮಾತನಾಡಿದ ಜೆಡಿಎಸ್ ಶಾಸಕ ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ಧರಾಮಯ್ಯ ಅವರ ಅನುಭವ ಇದೆ.ಬಡತನದ ಹಿನ್ನೆಲೆಯ ಸಿದ್ಧರಾಮಯ್ಯ ಕುಟುಂಬದ ಬಗ್ಗೆ ನನಗೆ ಗೊತ್ತಿದೆ.ಆ ಕಾರಣಕ್ಕೆ ಸಿದ್ಧರಾಮಯ್ಯ ಅನ್ನಭಾಗ್ಯ ತಂದಿದ್ದಾರೆ.ಅದಕ್ಕಾಗಿ ನಾನು ಸಿದ್ಧರಾಮಯ್ಯ ಅವರನ್ನು ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ಅವರ ಕುಟುಂಬ, ಹೋಲ, ಗದ್ದೆ ನನಗೆ ಗೊತ್ತು.ಅವರ ತುಂಬು ಕುಟುಂಬದ ಬಗ್ಗೆಯೂ ನನಗೆ ಗೊತ್ತು ಎಂದು ಜಿ.ಟಿ.ದೇವೆಗೌಡ ಆದರೆ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸಹಕಾರ ನೀಡದಿರುವುದು ಸರಿಯಲ್ಲ.ಅಕ್ಕಿಯನ್ನು ಕೇಂದ್ರ ಸರಕಾರ ನೀಡಬೇಕು.
 
ನಮ್ಮ ತೆರಿಗೆ ಕೇಂದ್ರ ಸರಕಾರಕ್ಕೆ ಹೋಗುವುದು.ಅನ್ನಭಾಗ್ಯಕ್ಕೆ ಅಕ್ಕಿ ಕೊಡಲ್ಲ ಅನ್ನೋದು ಸರಿಯಲ್ಲ.ಗಾಂಧೀಜಿ ಸಹ ಅನ್ನದ ಮಹತ್ವದ ಬಗ್ಗೆ ಹೇಳಿದ್ದಾರೆ.ಹಾಗಾಗಿ ಅನ್ನಭಾಗ್ಯ ಯೋಜನೆ ಸರಿಯಾಗಿ ಜಾರಿಯಾಗಬೇಕು ಎಂದ ಜಿ.ಟಿ.ದೇವೆಗೌಡ.... 
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಸಿದ್ದು ಪರ ಜ.ಟಿ.ಡಿ. ಬ್ಯಾಟಿಂಗ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ