ಪ್ರವಾಸಕ್ಕಾಗಿ ಗುಜರಾತ್ ಶಾಸಕರು ರಾಜ್ಯಕ್ಕೆ: ಡಿ.ಕೆ.ಸುರೇಶ್

ಶನಿವಾರ, 29 ಜುಲೈ 2017 (12:48 IST)
ಗುಜರಾತ್ ಶಾಸಕರು ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದಾರೆಯೇ ಹೊರತು ಬೇರೆ ಯಾವುದೇ ಕಾರಣಗಳಿಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
 
ನಿನ್ನೆ ಬೆಳಗಿನ ಜಾವ 1.30 ಗಂಟೆಗೆ ಗುಜರಾತ್‌ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಾಸಕರು ಅಲ್ಲಿಂದ ನೇರವಾಗಿ ಈಗಲ್‌ಟೌನ್ ರೆಸಾರ್ಟ್‌ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಾಳೆ ಶಾಸಕರು ಮೈಸೂರು-ಕೊಡುಗು ಜಿಲ್ಲೆಗಳ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
 
ಕಳೆದ ಕೆಲ ದಿನಗಳ ಹಿಂದೆ ಆರು ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ತಲೆನೋವು ತಂದಿದೆ. ಆದ್ದರಿಂದಲೇ ಕಾಂಗ್ರೆಸ್ ಶಾಸಕರನ್ನು ರಾಜ್ಯಕ್ಕೆ ರವಾನಿಸಲಾಗಿದೆ ಎನ್ನಲಾಗುತ್ತಿದೆ.
 
ಬಿಜೆಪಿ ಆಪರೇಷನ್ ಕಮಲ್ ಆರಂಭಿಸಿದ್ದು ಕಾಂಗ್ರೆಸ್ ಪಕ್ಷದ ಶಾಸಕರಿಗೆ 10 ಕೋಟಿ ರೂಪಾಯ ಆಫರ್ ನೀಡಿದೆ ಎನ್ನುವ ವರದಿಗಳು ಹರಡಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ