ಜೆಡಿಎಸ್ ಪಾಳಯದತ್ತ ಎಚ್.ವಿಶ್ವನಾಥ್ ಚಿತ್ತ?

ಸೋಮವಾರ, 20 ಮಾರ್ಚ್ 2017 (19:46 IST)
ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳಿಂದ ಬೇಸತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಎಚ್.ವಿಶ್ವನಾಥ್ ಪಕ್ಷ ತೊರೆಯುತ್ತಾರೆ ಎನ್ನುವ ವರದಿಗಳು ರಾಜ್ಯ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿದೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರೊಂದಿಗೆ ಭಿನ್ನಮತ ಉಂಟಾಗಿದೆ. ಪರಸ್ಪರ ವಾಗ್ವಾದಗಳಿಂದಾಗಿ ವಿಶ್ವನಾಥ್, ಕಾಂಗ್ರೆಸ್ ತೊರೆದು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. 
 
ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ಕೂಡಾ, ವಿಶ್ವನಾಥ್ ಅವರನ್ನು ಪಕ್ಷಕ್ಕೆ ಆಹ್ವಾನಿಸಲಾಗಿದೆ. ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.  
 
ಆದರೆ, ಜೆಡಿಎಸ್ ಪಕ್ಷ ಸೇರಲಿದ್ದೇನೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ವಿಶ್ವನಾಥ್, ಸದ್ಯ ಯಾವುದೇ ಪಕ್ಷ ಸೇರುವ ಬಗ್ಗೆ ಯೋಚನೆಯಿಲ್ಲ. ಸೂಕ್ತ ಸಮಯ ಬಂದಾಗ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ