ದೇವೇಗೌಡರನ್ನು ಭೇಟಿಯಾದ ಎಚ್.ವಿಶ್ವನಾಥ್: ರಾಜಕೀಯ ಕೋಲಾಹಲ

ಮಂಗಳವಾರ, 16 ಮೇ 2017 (18:49 IST)
ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿರುವುದು ಜೆಡಿಎಸ್, ಕಾಂಗ್ರೆಸ್ ವಲಯಗಳಲ್ಲಿ ಕೋಲಾಹಲ ಸೃಷ್ಟಿಸಿದೆ.
 
ಮಾಜಿ ಸಂಸದ ಎಚ್.ವಿಶ್ವನಾಥ್ ಇಂದು ದೇವೇಗೌಡನ್ನು ನಿವಾಸದಲ್ಲಿ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಆದರೆ, ಯಾವ ವಿಷಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
 
ವಿಶ್ವನಾಥ್ ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆ ಎನ್ನುವ ವರದಿಗಳ ಮಧ್ಯೆ, ಇಂದು ವಿಶ್ವನಾಥ್, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಕೆಲವೇ ದಿನಗಳಲ್ಲಿ ವಿಶ್ವನಾಥ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದೀಗ ವಿಶ್ವನಾಥ್ ಜೆಡಿಎಸ್ ಪಕ್ಷ ಸೇರಲಿದ್ದಾರೆಯೇ ಎನ್ನುವ ಅನುಮಾನ ಬಲಗೊಳ್ಳತೊಡಗಿದೆ ಎನ್ನುವುದು ಜೆಡಿಎಸ್ ಮುಖಂಡರ ಅಭಿಪ್ರಾಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ