ಕಾಗೋಡು ತಿಮ್ಮಪ್ಪ ಹಾಗೂ ಗೋಪಾಲಕೃಷ್ಣ ರನ್ನು ಟೀಕೆ ಮಾಡಿದ ಹರತಾಳು ಹಾಲಪ್ಪ

ಗುರುವಾರ, 3 ಮೇ 2018 (06:45 IST)
ಶಿವಮೊಗ್ಗ : ಜಿಲ್ಲೆಯ ರಿಪ್ಪನ್ ಪೇಟೆಯಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರು ಕಾಗೋಡು ತಿಮ್ಮಪ್ಪ ಹಾಗೂ ಬಿಜೆಪಿಯಿಂದ ಬಂಡಾಯ ಎದ್ದು ಕಾಗೋಡು ಬೆನ್ನಿಗೆ ನಿಂತಿರುವ ಸಾಗರದ ಮಾಜಿ ಶಾಸಕ ಗೋಪಾಲಕೃಷ್ಣ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,’ ಕಾಗೋಡು ತಿಮ್ಮಪ್ಪ ಮುದಿ ಎತ್ತು. ಗೋಪಾಲ ಕೃಷ್ಣ ಕಳ್ಳಹೋರಿ. ಇವರಿಬ್ಬರು ಸೇರಿಕೊಂಡು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಕಾಗೋಡು ತಿಮ್ಮಪ್ಪ ಈಡಿಗ ಸಮುದಾಯಕ್ಕೆ ಏನು ಮಾಡಿದ್ದಾರೆ ಎಂದು ಹೇಳಲಿ..? ಇವರ ಕಾಂಗ್ರೆಸ್ ಸರ್ಕಾರ ಎಷ್ಟು ಜನರಿಗೆ ಟಿಕೆಟ್ ನೀಡಿದೆ ಎಂದು ಸ್ಪಷ್ಪಪಡಿಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ